masthmagaa.com:
ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಿ ಅಂತ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ. ಈ ಹಿಂದೆ ಆಯ್ಕೆಪಟ್ಟಿ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ರದ್ದುಪಡಿಸಿದೆ. ‘ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 451 ಅಭ್ಯರ್ಥಿಗಳನ್ನು ಹೊರಗಿಡಲಾಗಿದೆ. ಈ ಅಭ್ಯರ್ಥಿಗಳು ತಮ್ಮ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಸ್ಎಟಿ) ಮುಂದೆ ತಮ್ಮ ವಾದ ಮಂಡಿಸಿ ಸೂಕ್ತ ನ್ಯಾಯ ಪಡೆಯಬಹುದು’ ಅಂತ ಸ್ಪಷ್ಟಪಡಿಸಿದೆ. ಅಂದ್ಹಾಗೆ ವಿವಾಹಿತ ಮಹಿಳೆಯರು ಪತಿಯ ಇನ್ಕಮ್ ಆಧಾರ ಅಡಿಯಲ್ಲಿ ತಮ್ಮ ಇನ್ಕಮ್ ಸರ್ಟಿಫಿಕೇಟ್ನ್ನ ನೇಮಕಾತಿ ವೇಳೆ ಸಲ್ಲಿಸಬೇಕಿತ್ತು. ಅದರ ಬದಲು, ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಅನ್ನೊ ಕಾರಣ ನೀಡಿ 451 ಅಭ್ಯರ್ಥಿಗಳನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಕೈಬಿಡಲಾಗಿತ್ತು. ಇದನ್ನು ಪ್ರಶ್ನಿಸಿ, ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.
-masthmagaa.com
Contact Us for Advertisement