masthmagaa.com:
ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯನ್ನ ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCCI) ಜೂನ್ 22 ರಂದು ದಿನ ಕರ್ನಾಟಕ ಬಂದ್ಗೆ ಕರೆ ನೀಡಿದೆ. ವಿದ್ಯುತ್ ದರ ಏರಿಕೆಯನ್ನ ಹಿಂಪಡೆಯುವಂತೆ ಜೂ.10 ರಂದು KCCI ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದ್ ವೇಳೆ ದರ ಏರಿಕೆಯನ್ನ ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು. ಆದ್ರೆ ಸರ್ಕಾರ ಈವರೆಗೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಅನಿವಾರ್ಯವಾಗಿ ಸರ್ಕಾರದ ಗಮನ ಸೆಳೆಯಲು KCCI ಬಂದ್ಗೆ ಕರೆ ನೀಡಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ಕಿಡಿಕಾರಿದೆ. ಸರ್ಕಾರ ಅಧಿಕಾರಕ್ಕೆ ಬಂದ ತಿಂಗಳೊಳಗೆ ಅದರ ವಿರುದ್ಧ ರಾಜ್ಯ ಬಂದ್ಗೆ ಕರೆ ಬಂದಿರುವುದು, ದೇಶದಲ್ಲೇ ಇದೇ ಮೊದಲು ಅಂತ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
-masthmagaa.com
Contact Us for Advertisement