masthmagaa.com:
ರಾಜ್ಯ ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಹಾಕ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಹಿಂದೂ ಸಂಘಟನೆಯೊಂದ್ರ ಕಾರ್ಯಕರ್ತ ಶಿವಾಜಿ ರಾವ್ ಜಾಧವ್ ಅಂತ ತಿಳಿದು ಬಂದಿದೆ. ಆರೋಪಿಯನ್ನು ಸದ್ಯ ಹತ್ತು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪತ್ರದ ಹಿಂದೆ ಶಿವಾಜಿ ಒಬ್ಬನೇ ಇದ್ದಾನಾ ಅಥವಾ ಆತನ ಹಿಂದೆ ಬೇರೆ ಯಾರಾದರೂ ಇದ್ದಾರ ಅನ್ನೋದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ ಅಂತ ಪೊಲೀಸರು ತಿಳಿಸಿದ್ದಾರೆ.
-masthmagaa.com
Contact Us for Advertisement