masthmagaa.com:
ತಮಿಳುನಾಡಿನ ವಿರೋಧ ಪಕ್ಷ AIADMKನ ಒಳ ರಾಜಕೀಯದಲ್ಲಿ ಮತ್ತೊಂದು ತಿರುವು ಸಿಕ್ಕಿದೆ. ಹೊಸದಾಗಿ ಎಐಎಡಿಎಂಕೆ ಕೌನ್ಸಿಲ್ ಸಭೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ. ಜುಲೈ 11ರಂದು ಪಕ್ಷದ ಸಾಮಾನ್ಯ ಮಂಡಳಿ ಸಭೆ ನಡೆಸಿ ಪಳನಿಸ್ವಾಮಿಯನ್ನ ಎಐಎಡಿಎಂಕೆ ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿತ್ತು. ಬಳಿಕ ಮತ್ತೊಂದು ಬಣದ ನಾಯಕರಾದ ಪನ್ನೀರ್ಸೆಲ್ವಂರನ್ನ ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಆದ್ರೆ ಈಗ ಅವತ್ತು ನಡೆದ ಆ ಸಭೆಯನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ. ಎಐಎಡಿಎಂಕೆ ಪಕ್ಷದಲ್ಲಿ ಹೊಸದಾಗಿ ಜನರಲ್ ಕೌನ್ಸಿಲ್ ಸಭೆ ನಡೆಸಲು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.
-masthmagaa.com
Contact Us for Advertisement