ಅಯೋಧ್ಯೆ ಬಳಿಕ ಕಾಶಿ ಮತ್ತು ಮಥುರಾ ವಿವಾದ..? ಹೊಸ ಟೆನ್ಶನ್​​..!

ಉತ್ತರಪ್ರದೇಶ: ಅಯೋಧ್ಯೆಯ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ವಿವಾದದಲ್ಲಿ ತೀರ್ಪು ಹೊರಬೀಳುವ ಮುನ್ನವೇ ಮತ್ತೊಂದು ವಿವಾದ ಹುಟ್ಟಿಕೊಳ್ಳೋ ಲಕ್ಷಣ ಕಾಣ್ತಿದೆ. ಯಾಕಂದ್ರೆ ಅಯೋಧ್ಯೆ ಬಳಿಕ ಕಾಶಿ ಮತ್ತು ಮಥುರಾ ನಮ್ಮ ಮುಂದಿನ ಗುರಿ ಸ್ವಾಮೀಜಿಗಳ ಒಕ್ಕೂಟ ಘೋಷಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಖಿಲ ಭಾರತ ಅಖರ ಪರಿಷತ್, ವಾರಾಣಸಿಯಲ್ಲಿನ ಕಾಶಿ ವಿಶ್ವನಾಥ ದೇವಸ್ಥಾನ, ಮಥುರಾದಲ್ಲಿನ ಶ್ರೀಕೃಷ್ಣ ಜನ್ಮಭೂಮಿಯಲ್ಲೂ ಮಸೀದಿ ನಿರ್ಮಾಣಕ್ಕೆ ದೇಗುಲಗಳನ್ನು ಧ್ವಂಸಗೊಳಿಸಲಾಗಿತ್ತು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದ ಬಳಿಕ ಕಾಶಿ ಮತ್ತು ಮಥುರಾದಲ್ಲೂ ದೇಗುಲಕ್ಕೆ ಹೊಂದಿಕೊಂಡಿರೊ ಮಸೀದಿಗಳ ತೆರವು ಕಾರ್ಯ ನಡೆಯುತ್ತೆ ಎಂದಿದ್ದಾರೆ. ಅಲ್ಲದೆ ಕೇಂದ್ರ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವೇ ಇರೋದ್ರಿಂದ ಅಯೋಧ್ಯೆ ಜೊತೆಗೆ ಕಾಶಿ ಮತ್ತು ಮಥುರಾದಲ್ಲೂ ಜಯ ನಮ್ಮದಾಗಲಿದೆ ಅಂತ ಸ್ವಾಮೀಜಿಗಳು ತಿಳಿಸಿದ್ದಾರೆ.

Contact Us for Advertisement

Leave a Reply