ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಇನ್ನಿಲ್ಲ!

masthmagaa.com:

ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ ಸಿಂಗ್ ನಿನ್ನೆ ರಾತ್ರಿ ಲಕ್ನೋದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ಧಾರೆ. 89 ವರ್ಷದ ಇವರು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ರು. ಜುಲೈ 4ರಿಂದಲೂ ಸಂಜಯ್ ಗಾಂಧಿ ಪೋಸ್ಟ್​ ಗ್ರಾಜುಯೇಟ್ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್​ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗ್ತಿತ್ತು. ಆದ್ರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಉತ್ತರ ಪ್ರದೇಶದಲ್ಲಿ 3 ದಿನಗಳ ಶೋಕಾಚರಣೆಗೆ ಕರೆ ನೀಡಲಾಗಿದೆ. ನಾಳೆ ಅಂತ್ಯಸಂಸ್ಕಾರ ನಡೆಯಲಿದ್ದು, ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಅಂದಹಾಗೆ ಬಾಬ್ರಿ ಮಸೀದಿ ಧ್ವಂಸದ ಸಮಯದಲ್ಲಿ ಇವರು ಉತ್ತರ ಪ್ರದೇಶ ಸಿಎಂ ಆಗಿದ್ದಿದ್ದನ್ನು ನಾವಿಲ್ಲಿ ನೆನೆಯಬಹುದು.

-masthmagaa.com

Contact Us for Advertisement

Leave a Reply