masthmagaa.com:
ಮಧ್ಯಪ್ರದೇಶದಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬರ ಮೇಲೆ ಬಿಜೆಪಿ ಶಾಸಕನ ಬೆಂಬಲಿಗನೊಬ್ಬ ಮೂತ್ರ ವಿಸರ್ಜನೆ ಮಾಡಿರೋ ಘಟನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಮೂತ್ರ ವಿಸರ್ಜನೆ ಮಾಡಲಾಗಿದ್ದ ವ್ಯಕ್ತಿಯ ಪಾದವನ್ನ ಅಲ್ಲಿನ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತೊಳೆದಿದ್ದಾರೆ. ಬುಡಕಟ್ಟು ವ್ಯಕ್ತಿ ದಶಮತ್ ರಾವತ್ ಅವ್ರನ್ನ ಸಿಎಂ ತಮ್ಮ ನಿವಾಸಕ್ಕೆ ಕರೆದುಕೊಂಡು ಹೋಗಿ ಪಾದ ತೊಳಿತಿರೋ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆರೋಪಿ ಪ್ರವೇಶ್ ಶುಕ್ಲಾ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಮಾಡ್ತಿರೋ ವಿಡಿಯೋ ನೋಡಿ ತುಂಬಾ ನೋವಾಗಿತ್ತು. ಅದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ ಜನರು ನನಗೆ ದೇವರು ಇದ್ದಂಗೆ ಅಂತ ಚೌಹಾಣ್ ಹೇಳಿದ್ದಾರೆ. ಅಂದ್ಹಾಗೆ ವಿಡಿಯೋ ವೈರಲ್ ಆಗ್ತಿದ್ದಂಗೆ ಆರೋಪಿ ಪ್ರವೇಶ್ ಶುಕ್ಲಾನನ್ನ ಬಂಧಿಸಲಾಗಿದ್ದು, ಈತ ಕ್ರಿಮಿನಲ್ ಹಿನ್ನಲೆ ಹೊಂದಿರೋದು ಗೊತ್ತಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ.
-masthmagaa.com
Contact Us for Advertisement