ಶೆಟ್ಟರ್‌ ಹಾಗೂ ಸವದಿ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

masthmagaa.com:

ರಾಜ್ಯ ವಿಧಾನಸಭಾ ಚುನಾವಣೆಗೆ ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿರೊ ಬಿಜೆಪಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ಗೆ ಟಿಕೆಟ್‌ ನೀಡಿಲ್ಲ. ಈ ಬಗ್ಗೆ ಸ್ವತಃ ಶೆಟ್ಟರ್‌ ಮಾತಾಡಿ ಅಸಮಾಧಾನ ಹೊರಹಾಕಿದ್ರು. ಇದೀಗ ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಶೆಟ್ಟರ್‌ಗೆ ಪಕ್ಷ ಟಿಕೆಟ್‌ ಕೊಟ್ಟೇ ಕೊಡುತ್ತೆ. ಶೆಟ್ಟರ್‌ಗೆ ಟಿಕೆಟ್‌ ಕೊಡಿ ಅಂತ ನಾನು ವರಿಷ್ಠರಿಗೆ ಹೇಳಿದ್ದೇನೆ ಎಂದಿದ್ದಾರೆ. ಇತ್ತ ಲಕ್ಷ್ಮಣ್‌ ಸವದಿ ಬಗ್ಗೆ ಮಾತಾಡಿದ ಯಡಿಯೂರಪ್ಪ, ಸವದಿಗೆ ಪಕ್ಷ ಎಲ್ಲ ಸ್ಥಾನಮಾನ ಕೊಟ್ಟಿದೆ. ಆದರೂ ಈ ರೀತಿ ತೀರ್ಮಾನ ಮಾಡಿದ್ದಾರೆ. ಅಸಮಾಧಾನಗೊಂಡ ಎಲ್ಲರನ್ನೂ ಮನವೊಲಿಕೆ ಮಾಡುತ್ತೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸೂಕ್ತ ಸ್ಥಾನಮಾನ ಕೊಡುತ್ತೇವೆ ಅಂತ ಹೇಳಿದ್ದಾರೆ. ಇನ್ನು ಇತ್ತ ಹೈಕಮಾಂಡ್‌ ವಿರುದ್ಧ ಜಗದೀಶ್‌ ಶೆಟ್ಟರ್‌ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಅವ್ರನ್ನ ದಿಲ್ಲಿಗೆ ಕರೆಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಫೋನ್‌ ಮಾಡಿದ್ದಕ್ಕೆ ದಿಲ್ಲಿಗೆ ಹೋಗ್ತಿದೀನಿ. ಎಲ್ಲ ಒಳ್ಳೆದು ಅಗುತ್ತೆ ಅಂತ ಶೆಟ್ಟರ್ ವಿಶ್ವಾಸ‌ ವ್ಯಕ್ತಪಡಿಸಿದ್ದಾರೆ.

-masthmagaa.com

Contact Us for Advertisement

Leave a Reply