masthmagaa.com:
ನೈಸ್ ಸಂಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ಡಿಸಿಎಂ ಡಿ.ಕೆ ಶಿವಕುಮಾರ್ ಅವ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ನೈಸ್ ಸಂಸ್ಥೆ ಹೆಸರಿನಲ್ಲಿ ಡಿ.ಕೆ. ಸಹೋದರರು ಬಾಚಿರುವ ರೈತರ ಭೂಮಿ ಹಾಗೂ ಅಕ್ರಮಗಳ ದಾಖಲೆಯನ್ನು ನಾಳೆ ಅಥವಾ ನಾಡಿದ್ದು ಬಹಿರಂಗ ಮಾಡೋದಾಗಿ ಹೇಳಿದ್ದಾರೆ. ಡಿಕೆ ಸುರೇಶ್ ಸಂಸದರಾಗುವುದಕ್ಕೂ ಮುಂಚೆ ಅವರ ಆಸ್ತಿ ಎಷ್ಟಿತ್ತು?ಈಗ ಎಷ್ಟಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಡಿಕೆ ಶಿವಕುಮಾರ್ 2004ರಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದು, ರಾಮನಗರ ಜಿಲ್ಲೆಯ ಉದ್ಧಾರಕ್ಕೋ ಅಥವಾ ನೈಸ್ ಕಂಪನಿ ಉದ್ಧಾರ ಮಾಡಿ ರೈತರ ಭೂಮಿ ಲೂಟಿ ಹೊಡೆಯುವುದಕ್ಕೋ ಅಂತ ವಾಗ್ದಾಳಿ ನಡೆಸಿದ್ದಾರೆ.
-masthmagaa.com
Contact Us for Advertisement