masthmagaa.com:
ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ದೆಹಲಿ ಪ್ರಯಾಣ ಕೈಗೊಂಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿಯಾಗಿ ಸುಮಾರು ಒಂದೂವರೆ ಗಂಟೆ ಚರ್ಚೆ ನಡೆಸಿದ್ದಾರೆ. ನಂತರ ಮಾತನಾಡಿದ ಅವರು, ರಾಹುಲ್ ಗಾಂಧಿ ನಾನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಬೇಕು ಅಂತ ಹೇಳಿದ್ರು. ಆದ್ರೆ ನಾನು ನಿರಾಕರಿಸಿದ್ದೀನಿ. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿ ಇಲ್ಲ. ನಾನು ಕರ್ನಾಟಕ ರಾಜಕೀಯಕ್ಕೆ ಸೀಮಿತವಾಗಿ ಇರ್ತೀನಿ ಅಂತ ಹೇಳಿದ್ದೀನಿ ಅಂತ ಹೇಳಿದ್ದಾರೆ.
-masthmagaa.com
Contact Us for Advertisement