masthmagaa.com:
ಇದ್ರ ಬೆನ್ನಲ್ಲೇ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ. ಸೋಂಕು ಹರಡುವಿಕೆ ಬಗ್ಗೆ ನಿಗಾ ವಹಿಸಿ, ಲಸಿಕೆ ಅಭಿಯಾನದ ವೇಗ ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದಾರೆ. ಈ ನಡುವೆ ಮನ್ ಕೀ ಬಾತ್ನಲ್ಲಿ ಮಾತಾಡಿದ ಪ್ರಧಾನಿ ಮೋದಿ, ಕೊರೋನಾ ಇನ್ನೂ ಕಡಿಮೆಯಾಗಿಲ್ಲ. ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳೋದು ನಮ್ಮೆಲ್ಲರ ಜವಾಬ್ದಾರಿ ಅಂತ ಹೇಳಿದ್ದಾರೆ.
ಜೊತೆಗೆ ಎಲ್ಲಾ ಅಂತಾರಾಷ್ಟ್ರೀಯ ವಿಮಾನಯಾನ ಆರಂಭಿಸೋ ನಿರ್ಧಾರವನ್ನು ಪುನರ್ ಪರಿಶೀಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇವತ್ತು ಗೃಹ ಕಾರ್ಯದರ್ಶಿ ಅಜಯ್ ಬಲ್ಲಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇತ್ತೀಚೆಗೆ ನಾಗರಿಕ ವಿಮಾನಯಾನ ಸಚಿವಾಲಯ ಡಿಸೆಂಬರ್ 15ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಯಾನ ಆರಂಭಿಸಲು ನಿರ್ಧರಿಸಿತ್ತು.
-masthmagaa.com
Contact Us for Advertisement