masthmagaa.com:
ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಇಂದು ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಅವ್ರ ನೇತೃತ್ವದಲ್ಲಿ ನಡೆದ BCCI ಸಭೆಯಲ್ಲಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ರೋಹಿತ್ ಶರ್ಮಾ ನಾಯಕತ್ವದ 15 ಆಟಗಾರರ ತಂಡವನ್ನ ಪ್ರಕಟಿಸಿದೆ. ತಂಡದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಸ್ಥಾನ ಪಡೆದುಕೊಂಡಿದ್ದು, ವಿಂಡೀಸ್ ಸರಣಿಯಲ್ಲಿ ಕೊಟ್ಟ ಅವಕಾಶ ಕೈಚೆಲ್ಲಿದ ಸಂಜು ಸ್ಯಾಮ್ಸನ್ ಅವರನ್ನ ತಂಡದಿಂದ ಕೈಬಿಡಲಾಗಿದೆ. ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ಗೆ ಅವಕಾಶ ನೀಡಲಾಗಿದೆ. ಸಿಂಪಲ್ ಆಗಿ ಹೇಳ್ಬೇಕಂದ್ರೆ ಏಷ್ಯಾಕಪ್ನ ತಂಡದಲ್ಲಿರುವವರಲ್ಲಿ ಪ್ರಸಿದ್ದ ಕೃಷ್ಣ, ತಿಲಕ್ ವರ್ಮಾ ಹೊರತುಪಡಿಸಿ ಉಳಿದವರು ವಿಶ್ವಕಪ್ ತಂಡದಲ್ಲಿ ಇದಾರೆ.
-masthmagaa.com
Contact Us for Advertisement