masthmagaa.com:
ಇಂದಿನಿಂದ 3 ದಿನಗಳ ಕಾಲ ಬೆಂಗಳೂರು ಅರಮನೆ ಮೈದಾನದಲ್ಲಿ ಟೆಕ್ ಸಮಿಟ್ ನಡೆಯಲಿದೆ. 25ನೇ ವರ್ಷದ ಬೆಂಗಳೂರು ಟೆಕ್ ಸಮಿಟ್ಗೆ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಐಟಿ-ಬಿಟಿ ಇಲಾಖೆ ಸಚಿವ ಅಶ್ವಥ್ ನಾರಾಯಣ ಸೇರಿದಂತೆ 31 ದೇಶಗಳ ಸಚಿವರು ಭಾಗಿಯಾಗಿದ್ದಾರೆ. ಇನ್ನು ಟೆಕ್ ಸಮಿಟ್ ಚಾಲನೆ ಬಳಿಕ ಮಾತನಾಡಿದ ಮೋದಿ, ಬೆಂಗಳೂರು ತಂತ್ರಜ್ಞಾನದ ತವರು. ಭಾರತದ ಆವಿಷ್ಕಾರ ವಲಯದಲ್ಲಿ ಬೆಂಗಳೂರು ನಂಬರ್ ಒನ್ ಆಗಿದೆ. ಭಾರತ ವಿಶ್ವದ 3ನೇ ಅತಿದೊಡ್ಡ ಸ್ಟಾರ್ಟ್ ಅಪ್ ಕೇಂದ್ರ ಅಂತ ಹೇಳಿದ್ದಾರೆ. ಇತ್ತ ಸಮಿಟ್ ಉದ್ಘಾಟಿಸಿ ಮಾತಾಡಿ ಸಿಎಂ ಬಸವರಾಜ ಬೊಮ್ಮಾಯಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ದಿ ಮತ್ತು ಆವಿಷ್ಕಾರ ಪ್ರೋತ್ಸಾಹಿಸೋಕೆ ಬೆಂಗಳೂರಿನಲ್ಲಿ ನವೋದ್ಯಮ ಪಾರ್ಕ್ ಸ್ಥಾಪಿಸೋದಾಗಿ ಅನೌನ್ಸ್ ಮಾಡಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ 6 ತಿಂಗಳ ಒಳಗೆ ನವೋದ್ಯಮ ಪಾರ್ಕ್ ಸ್ಥಾಪನೆಗೆ ಚಾಲನೆ ನೀಡಲಾಗುತ್ತೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement