masthmagaa.com:
ಮುಂಬೈನಿಂದ ರಾಂಚಿಗೆ ಹೋಗ್ತಿದ್ದೆ ಇಂಡಿಗೋ ಏರ್ಲೈನ್ಸ್ನ ವಿಮಾನವೊಂದ್ರ ಪ್ರಯಾಣಿಕರೊಬ್ಬರಿಗೆ ಅನಾರೋಗ್ಯ ಉಂಟಾಗಿದ್ದು, ನಾಗ್ಪುರದಲ್ಲಿ ಎಮರ್ಜೆನ್ಸಿ ಲ್ಯಾಂಡ್ ಮಾಡಲಾಗಿದೆ. 62 ವರ್ಷದ ಡಿ ತಿವಾರಿ ಅನ್ನೊ ಪ್ರಯಾಣಿಕ ರಕ್ತದ ವಾಂತಿ ಮಾಡಿಕೊಂಡಿದ್ದಾರೆ. ಹೀಗಾಗಿ ಮುಂಬೈನಿಂದ ರಾಂಚಿಗೆ ತೆರಳುತ್ತಿದ್ದ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಪ್ರಯಾಣಿಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲಾಗಲೇ ತಿವಾರಿ ಮೃತಪಟ್ಟಿದ್ದಾರೆ. ಪ್ರಯಾಣಿಕನು ಕಿಡ್ನಿ ಮತ್ತು ಕ್ಷಯರೋಗದಿಂದ ಬಳಲುತ್ತಿದ್ದು, ವಿಮಾನದಲ್ಲಿ ರಕ್ತ ವಾಂತಿ ಮಾಡಿಕೊಂಡಿದ್ದಾರೆ ಅಂತ ವೈದ್ಯರು ಹೇಳಿದ್ದಾರೆ.
-masthmagaa.com
Contact Us for Advertisement