ಕರ್ನಾಟಕ ಬಿಜೆಪಿ ಮುಕ್ತವಾಗಲಿದೆ: ಎಂ.ಪಿ ರೇಣುಕಾಚಾರ್ಯ

masthmagaa.com:

ರಾಜ್ಯ ಬಿಜೆಪಿ ಪಾಳಯದಲ್ಲಿ ಆಂತರಿಕ ಬಿಕ್ಕಟ್ಟು ಮುಂದುವರೆದಿದೆ. ಇದೀಗ ಶೀಘ್ರದಲ್ಲೇ ಕರ್ನಾಟಕ ರಾಜ್ಯ ಬಿಜೆಪಿ ಮುಕ್ತವಾಗಲಿದೆ ಅಂತ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪನವರನ್ನ ಪಕ್ಷದಲ್ಲಿ ಕಡೆಗಣಿಸಿದ್ದೇ ಬಿಜೆಪಿಗೆ ಶಾಪವಾಗಿ ಪರಿಣಮಿಸಿದೆ. ಯಡಿಯೂರಪ್ಪ ಅವ್ರನ್ನ ಸಿಎಂ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಲಾಯಿತು. ಇದರ ಪರಿಣಾಮ ಪಕ್ಷಕ್ಕೆ ಭಾರೀ ಹಾನಿಯಾಗಿದೆ. ಕರ್ನಾಟಕದಲ್ಲಿ ನಾವು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಅಂತ ಹೇಳಿದ್ದೆವು. ಆದರೆ, ಇಂದು ನಮ್ಮ ಪಕ್ಷಕ್ಕೆ ಅದೇ ಪರಿಸ್ಥಿತಿ ಬಂದಿದೆ. ರಾಜ್ಯ ಬಿಜೆಪಿ ಮುಕ್ತವಾಗಲಿದೆ ಅಂತ ತಮ್ಮದೇ ಪಕ್ಷದವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯೇ ಇಲ್ಲ ಅಂತ ಆರೋಪಿಸಿದ್ದಾರೆ. ಜೊತೆಗೆ ಪಕ್ಷವನ್ನ ದೂರದ ಸ್ಥಳದಲ್ಲಿರೊ ಯಾರೋ ನಿಯಂತ್ರಿಸುತ್ತಾರೆ. ಇದೇ ರೀತಿ ಕಂಟಿನ್ಯೂ ಆದ್ರೆ ಪಕ್ಷ ಸರ್ವನಾಶವಾಗಲಿದೆ. ಬಿಜೆಪಿ ನಾಯಕರು ಭ್ರಮೆಯಲ್ಲಿ ಬದುಕುತ್ತಿದ್ದು, ಇದರಿಂದ ಮೊದಲು ಹೊರಬರಬೇಕು. ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇನ್ನೂ ಹೊಸ ರಾಜ್ಯಾಧ್ಯಕ್ಷರ ನೇಮಕ ಮಾಡಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದ್ರಿಂದ ಯಡಿಯೂರಪ್ಪನವರ ಮನಸ್ಸಿಗೆ ಬಹಳ ಬೇಸರವಾಗಿದೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply