masthmagaa.com:
ದೇಶದಲ್ಲಿರೋ ಹಣದುಬ್ಬಕ್ಕೆ ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಕಾರಣ ಅಂತ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. ಬೆಲೆಯೇರಿಕೆ ಖಂಡಿಸಿ ವಿಪಕ್ಷಗಳ ಪ್ರತಿಭಟನೆ ಕುರಿತು ಮಾತನಾಡಿದ ಮಧ್ಯಪ್ರದೇಶದ ಸಚಿವ ವಿಶ್ವಾಸ್ ಸಾರಂಗ್, ಇದು ಒಂದೆರಡು ದಿನಗಳ ಸಮಸ್ಯೆ ಅಲ್ಲ.. ದೇಶದ ಆರ್ಥಿಕತೆಯ ಪತನ 1947ರ ಆಗಸ್ಟ್ 15ರಂದು ಕೆಂಪುಕೋಟೆಯಲ್ಲಿ ಜವಾಹರ್ ಲಾಲ್ ನೆಹರು ಭಾಷಣ ಮಾಡಿದ್ರಲ್ವಾ ಅವತ್ತೇ ಶುರುವಾಯ್ತು ಅಂತ ಹೇಳಿದ್ದಾರೆ. ಅದೇ ಕೇಂದ್ರದಲ್ಲಿ ಪ್ರಧಾನಿ ಮೋದಿ ಸರ್ಕಾರ ಬಂದ ಬಳಿಕ ಆರ್ಥಿಕತೆ ಬಲಿಷ್ಠವಾಗಿದೆ. ಹಣದುಬ್ಬರ ಕಡಿಮೆಯಾಗಿದೆ. ಜನರ ಆದಾಯ ಜಾಸ್ತಿಯಾಗಿದೆ. ಕಾಂಗ್ರೆಸ್ಸಿಗರು ಸೋನಿಯಾ ಗಾಂಧಿ ಮನೆ ಮುಂದೆ ಹೋಗಿ ಪ್ರೊಟೆಸ್ಟ್ ಮಾಡ್ಬೇಕು ಅಂತ ಹೇಳಿದ್ದಾರೆ. ಅಂದಹಾಗೆ ಇವತ್ತು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 105 ರೂಪಾಯಿ ಆಗಿದೆ. ಇನ್ನು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 95 ರೂಪಾಯಿಯಷ್ಟಿದೆ.
-masthmagaa.com
Contact Us for Advertisement