ನಟ ಜಗ್ಗೇಶ್ ಎರಡನೇ ಪುತ್ರ ಯತಿರಾಜ್ ಅಪಘಾತದಿಂದ ಪಾರು!!

‘ನವರಸ ನಾಯಕ’ ಜಗ್ಗೇಶ್ ಅವರ ಪುತ್ರ ಯತಿರಾಜ್ ಪ್ರಯಾಣ ಮಾಡುತ್ತಿದ್ದ ಕಾರು ಇಂದು ಅಪಘಾತಕ್ಕೀಡಾಗಿದ್ದು ಜಗ್ಗೇಶ್ ಪುತ್ರ ಯತಿರಾಜ್ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ಈ ಬಗ್ಗೆ  ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ರಾಯರು ನನ್ನ ಜೊತೆ ಸದ ಇರುತ್ತಾರೆ ಇದ್ದಾರೆ. ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆವುದೆ ನಾನಿದ್ದೀನೋ ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು. ನಿನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ. ಸದಾ ಅವರ ಸ್ಮರಣೆಯಲ್ಲೆ ಬದುಕುವ ನನಗೆ ಇದು ಮತ್ತೊಂದು ಪವಾಡ, ನಂಬಿ ಕೆಟ್ಟವರಿಲ್ಲಾ ಗುರುರಾಯರ. ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲಾ ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಹೊರ ಹೋದ ಮಗ ಯತಿರಾಜ, ಅವನು ಪ್ರತಿಬಾರಿ ಅವನ ಇಷ್ಟದ ರಸ್ತೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆಬಿದ್ದಿದೆ, ರಾಯರದಯೇ ಹಾಗು ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವು ಇಲ್ಲ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
 
ಇಂದು ಮಧ್ಯಾಹ್ನ ಅಪಘಾತ ನಡೆದಿದ್ದು, ಮರಕ್ಕೆ ಡಿಕ್ಕಿ ಹೊಡೆದಾಗ ಕಾರ್‌ನಲ್ಲಿದ್ದ ಏರ್ ಬ್ಯಾಗ್ ಓಪನ್ ಆದ ಕಾರಣ ಕಾರಿನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ. ಈ ಅಪಘಾತದಲ್ಲಿ  ಯತಿರಾಜ್‌ಗೆ ಯಾವುದೇ ಗಾಯಗಳಾಗಿಲ್ಲ.
 
Contact Us for Advertisement

Leave a Reply