ಪಾಕ್​​ನಿಂದ ಕದನ ವಿರಾಮ ಉಲ್ಲಂಘನೆ.. ಓರ್ವ ಸಾವು.. ಮೂವರಿಗೆ ಗಾಯ

ಜಮ್ಮು ಕಾಶ್ಮೀರ: ಪಾಕಿಸ್ತಾನ ಗಡಿಯಲ್ಲಿ ತನ್ನ ಪುಂಡ ಬುದ್ಧಿಯನ್ನು ಮುಂದುವರಿಸಿದೆ. ಕದನ ವಿರಾಮ ಉಲ್ಲಂಘಿಸಿದ್ದು, ಓರ್ವ ನಾಗರಿಕ ಸಾವನ್ನಪ್ಪಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ. ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಘರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 2 ಮನೆಗಳು ಕೂಡ ಜಖಂ ಆಗಿವೆ. ಕಳೆದ ವಾರ ಬಾರಾಮುಲ್ಲಾ ಮತ್ತು ರಜೌರಿಯಲ್ಲಿ ನಡೆದಿದ್ದ ಪ್ರತ್ಯೇಕ ಕದನ ವಿರಾಮ ಉಲ್ಲಂಘನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಕದನ ವಿರಾಮ ಉಲ್ಲಂಘನೆ ಮತ್ತು ನಾಗರಿಕನ ಹತ್ಯೆಯನ್ನು ಪಾಕಿಸ್ತಾನ ಖಂಡಿಸಿದೆ.

ಜಮ್ಮು ಕಾಶ್ಮೀರಕ್ಕೆ 370ನೇ ವಿಧಿಯನ್ವಯ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸಿದೆ. ಜುಲೈನಲ್ಲಿ 296, ಆಗಸ್ಟ್​​ನಲ್ಲಿ 292, ಸೆಪ್ಟೆಂಬರ್​ನಲ್ಲಿ 307 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಈ ವರ್ಷದಲ್ಲಿ ಸೆಪ್ಟೆಂಬರ್​​ವರೆಗೆ ಬರೋಬ್ಬರಿ 2050 ಬಾರಿ ಪಾಕಿಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ.

Contact Us for Advertisement

Leave a Reply