ಆಪರೇಷನ್ ಅಂತ್ಯ..ಮೂವರು ಉಗ್ರರು ಫಿನಿಷ್..ಓರ್ವ ಯೋಧ ಹುತಾತ್ಮ

ಜಮ್ಮು ಕಾಶ್ಮೀರದಲ್ಲಿ ಸೇನೆ ಕಾರ್ಯಾಚರಣೆ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ರಾಮಬನದ ಬಟೋಟೆಯಲ್ಲಿ ಇಬ್ಬರಿಂದ ಮೂವರು ಉಗ್ರರು ಪ್ರಯಾಣಿಕರಿದ್ದ ಬಸ್ ತಡೆಯಲು ಯತ್ನಿಸಿದ್ದಾರೆ. ಸೇನಾ ಸಮವಸ್ತ್ರದಲ್ಲಿದ್ದ ಉಗ್ರರನ್ನು ಕಂಡ ಬಸ್ ಡ್ರೈವರ್ ಬಸ್ ನಿಲ್ಲಿಸದೇ ವೇಗ ಹೆಚ್ಚಿಸಿದ್ದಾನೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು, ಆ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ಆರಂಭಿಸಿದ್ದಾರೆ. ಆದ್ರೆ ಈಗ ಮನೆಯೊಂದಕ್ಕೆ ನುಗ್ಗಿರುವ ಉಗ್ರರು ಮನೆಯವರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದರು. ಮನೆಯನ್ನು ಸುತ್ತುವರಿದು ಕಾರ್ಯಾಚರಣೆ ಆರಂಭಿಸಿದ ಯೋಧರು ಮೂವರೂ ಉಗ್ರನ್ನು ಹೊಡೆದು ಹಾಕಿದ್ದಾರೆ. ಮನೆಯಲ್ಲಿ ಒತ್ತೆಯಾಳಾಗಿದ್ದವರನ್ನು ರಕ್ಷಿಸಿದ್ದಾರೆ. ಆದ್ರೆ ಈ ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.

ಮತ್ತೊಂದು ಕಡೆ ಗಂದೇರ್ ಬಲ್ ಬಳಿ ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಅತ್ತ ಶ್ರೀನಗರದಲ್ಲಿ ಗ್ರೆನೇಡ್ ದಾಳಿ ನಡೆಸಿದ್ದಾರೆ. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ನಿನ್ನೆಯಷ್ಟೇ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಅಜಿತ್ ಧೋವಲ್, ಗಡಿಯಲ್ಲಿ ಉಗ್ರರ ನುಸುಳುವಿಕೆ ಬಗ್ಗೆ ಮಾಹಿತಿ ಸಿಕ್ಕಿದ್ದು ಉಗ್ರ ನಿಗ್ರಹ ಕಾರ್ಯಾಚರಣೆ ಶುರು ಮಾಡಿ ಎಂದಿದ್ದರು.

Contact Us for Advertisement

Leave a Reply