masthmagaa.com:
ಮಾಜಿ ಸಚಿವ, KRPP ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಮಾಜಿ ಸಿಎಂ BS ಯಡಿಯೂರಪ್ಪ ಹಾಗೂ BY ವಿಜಯೇಂದ್ರ ಸಮ್ಮುಖದಲ್ಲಿ ರೆಡ್ಡಿ ತಮ್ಮ KRPP ಪಕ್ಷವನ್ನ ಬಿಜೆಪಿಯಲ್ಲಿ ವಿಲೀನ ಮಾಡೊದಾಗಿ ಘೋಷಿಸಿದ್ದಾರೆ. ಈ ವಿಚಾರವಾಗಿ ಮಾತನಾಡಿದ ವಿಜಯೇಂದ್ರ, ರೆಡ್ಡಿಯವ್ರು ʻಮರಳಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಕ್ಕೆ ಐತಿಹಾಸಿಕ ಗೆಲವು ಖಚಿತʼ ಅಂತೇಳಿದ್ದಾರೆ.
-masthmagaa.com
Contact Us for Advertisement