masthmagaa.com:
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬೆನ್ನಲ್ಲೇ ಎರಡೂ ಪಕ್ಷಗಳ ಹಲವು ನಾಯಕರು ಅಸಮಾಧಾನಗೊಂಡಿದ್ದಾರೆ. ಕಾಂಗ್ರೆಸ್ನ ವಿರುದ್ಧ ಮಾಡಿಕೊಂಡ ಮೈತ್ರಿಯಿಂದ ಕಾಂಗ್ರೆಸ್ಗೆ ಉಪಯೋಗ ಆಗೋ ರೀತಿ ಕಾಣ್ತಿದ್ದು, ಹಲವರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಇದೀಗ ‘ಜೆಡಿಎಸ್-ಬಿಜೆಪಿ ಮೈತ್ರಿ ಎರಡೂ ಪಕ್ಷಗಳ ಕೆಲವು ನಾಯಕರಿಗೆ ಇಷ್ಟವಿಲ್ಲ. ಅಂತಹ ಕೆಲವರು ನಮ್ಮನ್ನು ಸಂಪರ್ಕಿಸಿರೋದು ನಿಜ’ ಅಂತ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ನಾವು ಆಪರೇಷನ್ ಹಸ್ತ ಮಾಡ್ತಿಲ್ಲ. ನಾವಾಗಿಯೇ ಯಾರನ್ನೂ ಸಂಪರ್ಕಿಸಿಲ್ಲ ಹಾಗೂ ಯಾರಿಗೂ ತೊಂದರೆ ಕೊಡುತ್ತಿಲ್ಲ. ನಾವು 136 ಸ್ಥಾನಗಳಲ್ಲಿ ಗೆದ್ದಿರುವಾಗ ನಮಗೆ ಯಾರ ಅವಶ್ಯಕತೆಯೂ ಇಲ್ಲ. ಆದ್ರೆ ಬಂದ್ರೆ ಬೇಡ ಅನ್ನಲ್ಲ ಅಂತ ಹೇಳಿದ್ದಾರೆ.
-masthmagaa.com
Contact Us for Advertisement