masthmagaa.com:
ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಅನ್ನೊ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವ್ರ ಹೇಳಿಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಅಂತ ಟೀಕಿಸಿದೆ. ಇದೇ ವೇಳೆ ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ಸಂತೋಷ್ ಅವರು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು. ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನು ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಅನ್ನೋದು ಶತಮಾನದ ಜೋಕ್ ಅಂತ ವ್ಯಂಗ್ಯ ಮಾಡಿದೆ.
-masthmagaa.com
Contact Us for Advertisement