ಆರ್‌ಆರ್‌ಆರ್‌ ವಾದಕ್ಕೆ ತಿರುಗೇಟು ಕೊಟ್ಟ ಕೆ.ರಾಘವೇಂದ್ರ ರಾವ್‌

masthmagaa.com:

ಈ ಬಾರಿಯ ಆಸ್ಕರ್‌ನಲ್ಲಿ ಆರ್‌ಆರ್‌ಆರ್‌ ಸಿನಿಮಾದ ಹಾಡು ನಾಮಿನೇಟ್‌ ಆಗಿದೆ. ಈಗಾಗಲೇ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯನ್ನು ಗೆದ್ದಿರುವ ಈ ಹಾಡಿಗೆ ಆಸ್ಕರ್‌ ಕೂಡ ಬರತ್ತೆ ಅಂತ ಅಭಿಮಾನಿಗಳು ಕಾಯ್ತಾ ಕೂತಿದ್ದಾರೆ. 80 ಕೋಟಿ ರೂಪಾಯಿ ಸುರಿದು ಪ್ರಚಾರ ಮಾಡುವ ಮೂಲಕ ಆಸ್ಕರ್​ ಪಡೆಯಲು ರಾಜಮೌಳಿ ಪ್ರಯತ್ನಿಸುತ್ತಿದ್ದಾರೆ ಎಂದು ತೆಲುಗಿನ ನಿರ್ಮಾಪಕ ತಮ್ಮಾರೆಡ್ಡಿ ಭಾರಧ್ವಜ ಅವರು ಆರೋಪಿಸಿದ್ರು. ಆದರೆ ಅವರ ಮಾತನ್ನು ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್​ ಅವರು ತೀವ್ರವಾಗಿ ವಿರೋಧಿಸಿದ್ದಾರೆ. ‘ನಲ್ಮೆಯ ಸ್ನೇಹಿತ ಭಾರದ್ವಜ ಅವರೇ.. ತೆಲುಗು ಸಿನಿಮಾ, ಸಾಹಿತ್ಯ, ನಟರು ಮತ್ತು ನಿರ್ದೇಶಕರಿಗೆ ಆರ್​ಆರ್​ಆರ್​ ಚಿತ್ರವು ಕೀರ್ತಿ ತಂದುಕೊಟ್ಟಿದ್ದಕ್ಕಾಗಿ ನಾವೆಲ್ಲರೂ ಹೆಮ್ಮೆಪಡಬೇಕು. ಖರ್ಚು ಮಾಡಿದ ಹಣದ ಬಗ್ಗೆ ನಿಮ್ಮ ಬಳಿ ಲೆಕ್ಕ ಇದೆಯಾ? ಲೆಜೆಂಡರಿ ನಿರ್ದೇಶಕರಾದ ಜೇಮ್ಸ್​ ಕ್ಯಾಮೆರಾನ್​ ಮತ್ತು ಸ್ಟೀವಲ್​ ಸ್ಪೀಲ್​ಬರ್ಗ್​ ಅವರು ಹಣ ತೆಗೆದುಕೊಂಡು ಆರ್​ಆರ್​ಆರ್​ ಸಿನಿಮಾವನ್ನು ಹೊಗಳಿದರು ಎಂಬುದು ನಿಮ್ಮ ಅಭಿಪ್ರಾಯವೇ?’ ಎಂದು ಕೆ. ರಾಘವೇಂದ್ರ ರಾವ್​ ಅವರು ಟ್ವೀಟ್​ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ಭಾರತದಲ್ಲಿ ಮಾರ್ಚ್​ 13ರಂದು ಮುಂಜಾನೆ ಆಸ್ಕರ್​ ಪ್ರಶಸ್ತಿ ಪ್ರಧಾನ ಸಮಾರಂಭ ಪ್ರಸಾರ ಆಗಲಿದೆ. ‘ಆರ್​ಆರ್​ಆರ್​’ ತಂಡದವರು ಈಗಾಗಲೇ ಲಾಸ್​ ಏಂಜಲಿಸ್​ಗೆ ತೆರಳಿದ್ದಾರೆ. ಈ ಬಾರಿ ಆಸ್ಕರ್​ ಟ್ರೋಫಿ ನೀಡಲು ದೀಪಿಕಾ ಪಡುಕೋಣೆ ಅವರಿಗೆ ಅವಕಾಶ ಸಿಕ್ಕಿದೆ.

-masthmagaa.com

Contact Us for Advertisement

Leave a Reply