masthmagaa.com:
ಈ ಬಾರಿಯ ಆಸ್ಕರ್ನಲ್ಲಿ ಆರ್ಆರ್ಆರ್ ಸಿನಿಮಾದ ಹಾಡು ನಾಮಿನೇಟ್ ಆಗಿದೆ. ಈಗಾಗಲೇ ‘ಗೋಲ್ಡನ್ ಗ್ಲೋಬ್’ ಪ್ರಶಸ್ತಿಯನ್ನು ಗೆದ್ದಿರುವ ಈ ಹಾಡಿಗೆ ಆಸ್ಕರ್ ಕೂಡ ಬರತ್ತೆ ಅಂತ ಅಭಿಮಾನಿಗಳು ಕಾಯ್ತಾ ಕೂತಿದ್ದಾರೆ. 80 ಕೋಟಿ ರೂಪಾಯಿ ಸುರಿದು ಪ್ರಚಾರ ಮಾಡುವ ಮೂಲಕ ಆಸ್ಕರ್ ಪಡೆಯಲು ರಾಜಮೌಳಿ ಪ್ರಯತ್ನಿಸುತ್ತಿದ್ದಾರೆ ಎಂದು ತೆಲುಗಿನ ನಿರ್ಮಾಪಕ ತಮ್ಮಾರೆಡ್ಡಿ ಭಾರಧ್ವಜ ಅವರು ಆರೋಪಿಸಿದ್ರು. ಆದರೆ ಅವರ ಮಾತನ್ನು ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ ಅವರು ತೀವ್ರವಾಗಿ ವಿರೋಧಿಸಿದ್ದಾರೆ. ‘ನಲ್ಮೆಯ ಸ್ನೇಹಿತ ಭಾರದ್ವಜ ಅವರೇ.. ತೆಲುಗು ಸಿನಿಮಾ, ಸಾಹಿತ್ಯ, ನಟರು ಮತ್ತು ನಿರ್ದೇಶಕರಿಗೆ ಆರ್ಆರ್ಆರ್ ಚಿತ್ರವು ಕೀರ್ತಿ ತಂದುಕೊಟ್ಟಿದ್ದಕ್ಕಾಗಿ ನಾವೆಲ್ಲರೂ ಹೆಮ್ಮೆಪಡಬೇಕು. ಖರ್ಚು ಮಾಡಿದ ಹಣದ ಬಗ್ಗೆ ನಿಮ್ಮ ಬಳಿ ಲೆಕ್ಕ ಇದೆಯಾ? ಲೆಜೆಂಡರಿ ನಿರ್ದೇಶಕರಾದ ಜೇಮ್ಸ್ ಕ್ಯಾಮೆರಾನ್ ಮತ್ತು ಸ್ಟೀವಲ್ ಸ್ಪೀಲ್ಬರ್ಗ್ ಅವರು ಹಣ ತೆಗೆದುಕೊಂಡು ಆರ್ಆರ್ಆರ್ ಸಿನಿಮಾವನ್ನು ಹೊಗಳಿದರು ಎಂಬುದು ನಿಮ್ಮ ಅಭಿಪ್ರಾಯವೇ?’ ಎಂದು ಕೆ. ರಾಘವೇಂದ್ರ ರಾವ್ ಅವರು ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ಭಾರತದಲ್ಲಿ ಮಾರ್ಚ್ 13ರಂದು ಮುಂಜಾನೆ ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭ ಪ್ರಸಾರ ಆಗಲಿದೆ. ‘ಆರ್ಆರ್ಆರ್’ ತಂಡದವರು ಈಗಾಗಲೇ ಲಾಸ್ ಏಂಜಲಿಸ್ಗೆ ತೆರಳಿದ್ದಾರೆ. ಈ ಬಾರಿ ಆಸ್ಕರ್ ಟ್ರೋಫಿ ನೀಡಲು ದೀಪಿಕಾ ಪಡುಕೋಣೆ ಅವರಿಗೆ ಅವಕಾಶ ಸಿಕ್ಕಿದೆ.
-masthmagaa.com
Contact Us for Advertisement