masthmagaa.com:

ಕೊರೋನಾ ವೈರಸ್​​ ದೃಢಪಟ್ಟಿದ್ದ ಉತ್ತರ ಪ್ರದೇಶ ಸಚಿವೆ ಕಮಲ್ ರಾಣಿ ವರುಣ್ ಭಾನುವಾರ ಬೆಳಗ್ಗೆ ಲಕ್ನೋನ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ತಾಂತ್ರಿಕ ಶಿಕ್ಷಣ ಸಚಿವೆಯಾಗಿದ್ದ ಅವರಿಗೆ 62 ವರ್ಷ ವಯಸ್ಸಾಗಿತ್ತು.

ಕೊರೋನಾ ವೈರಸ್ ಪಾಸಿಟಿವ್ ಬಂದ ಹಿನ್ನೆಲೆ ಕಮಲ್ ರಾಣಿ ಅವರನ್ನು ಜುಲೈ 18ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ಎರಡು ವಾರದಲ್ಲೇ ಕೊನೆಯುಸಿರೆಳೆದಿದ್ದಾರೆ. ಶ್ವಾಸಕೋಶಕ್ಕೆ ಸೋಂಕು ತಗುಲಿದ ನಂತರ ಅವರ ಆರೋಗ್ಯ ಹದಗೆಟ್ಟಿತ್ತು. ಅವರನ್ನು ಜೀವ ರಕ್ಷಕದಲ್ಲಿ ಇಡಲಾಗಿತ್ತು. ಎಲ್ಲಾ ರೀತಿಯ ಪ್ರಯತ್ನಗಳ ಹೊರತಾಗಿಯೂ ಅವರು ಮೃತಪಟ್ಟಿದ್ದಾರೆ ಅಂತ ವೈದ್ಯರು ಹೇಳಿದ್ದಾರೆ.

ಸಚಿವೆಯ ಸಾವಿಗೆ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಕಮಲ್ ರಾಣಿ ವರುಣ್​ರವರು ಜನಪ್ರಿಯ ನಾಯಕಿ ಮತ್ತು ಸಮಾಜ ಸೇವಕರಾಗಿದ್ದರು. ನನ್ನ ಕ್ಯಾಬಿನೆಟ್​ನಲ್ಲಿ ಇದ್ದಾಗ ಸಮರ್ಥವಾಗಿ ಕೆಲಸ ಮಾಡಿದ್ದರು ಅಂತ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply