masthmagaa.com:

ದೇಶದ್ರೋಹ ಆರೋಪ ಎದುರಿಸುತ್ತಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್‌ ಹಾಗೂ ಆಕೆಯ ಸಹೋದರಿ ರಂಗೋಲಿ ಚಂಡೇಲ್ ಸಲ್ಲಿಸಿದ್ದ ಅರ್ಜಿಯ‌ ವಿಚಾರಣೆ ಇಂದು ಬಾಂಬೆ ಹೈಕೋರ್ಟ್‌ನಲ್ಲಿ ನಡೆಯಿತು. ಈ ವೇಳೆ ಕೋರ್ಟ್‌ ಕಂಗನಾ ಹಾಗೂ ಆಕೆಯ ಸಹೋದರಿಗೆ ಜನವರಿ 8ರಂದು ಮುಂಬೈ ಪೊಲೀಸರ ಮುಂದೆ ಹಾಜರಾಗುವಂತೆ ಹೇಳಿದೆ. ಅಲ್ಲಿವರೆಗೆ ಮುಂಬೈ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಇದರಿಂದ ಇಬ್ಬರಿಗೂ ರಿಲೀಫ್‌ ಸಿಕ್ಕಿದೆ.

ಸಾಮಾಜಿಕ ಜಾಲತಾಣಗಳ ಮುಖಾಂತರ ಎರಡು ಸಮುದಾಯಗಳ ಮಧ್ಯೆ ಕೋಮು ದ್ವೇಷ ಸೃಷ್ಟಿ ಮಾಡಿದ ಆರೋಪಕ್ಕೆ  ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕಂಗನಾ ಮತ್ತು ರಂಗೋಲಿಗೆ ಮುಂಬೈ ಪೊಲೀಸರು ಎರಡು ಬಾರಿ ಸಮನ್ಸ್‌ ಜಾರಿ ಮಾಡಿದ್ದರು. ಆದ್ರೆ ಸಹೋದರನ ಮದುವೆ ಕಾರಣವೊಡ್ಡಿ‌ ಇಬ್ಬರೂ ವಿಚಾರಣೆಗೆ ಗೈರಾಗಿದ್ದರು. ಅಲ್ಲದೇ ತಮ್ಮ ಮೇಲಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

-masthmagaa.com

Contact Us for Advertisement

Leave a Reply