ಪುನೀತ್‌ ನಮನ : ಅಭಿಮಾನಿಗಳಿಗೆ ಪ್ರತ್ಯೇಕ ಕಾರ್ಯಕ್ರಮ

masthmagaa.com:

ಪುನೀತ್​ ರಾಜ್​​ಕುಮಾರ್ ಅಗಲಿಕೆ​ ಹಿನ್ನೆಲೆ ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್​ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ನಟ ನಟಿಯರು, ಮತ್ತು ದಕ್ಷಿಣ ಭಾರತದ ಸಿನಿ ಸ್ಟಾರ್ಸ್​​ಗೆ ಆಮಂತ್ರಣ ನೀಡಲಾಗಿದೆ. ಜೊತೆಗೆ ರಾಜಕಾರಣಿಗಳು, ಗಣ್ಯರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹೀಗೆ ಸುಮಾರು ಎರಡು ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ.
ನಾಳೆಯ ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ. ಆದ್ರೆ ಅಭಿಮಾನಿಗಳಿಗೇ ಅಂತಾನೇ ಪ್ರತ್ಯೇಕ ಕಾರ್ಯಕ್ರಮ ನಡೆಸಲು ಚಲಚಿತ್ರ ವಾಣಿಜ್ಯ ಮಂಡಳಿ ಮತ್ತು ಶಿವರಾಜ್​​ಕುಮಾರ್​ ನಿರ್ಧಾರಿಸಿದ್ದಾರೆ. ಬೆಂಗಳೂರು ಬಿಟ್ಟು ರಾಜ್ಯದ ಇನ್ನೊಂದು ಭಾಗದಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತೆ. ಎಲ್ಲಿ, ಯಾವತ್ತು ಅಂತ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುತ್ತೆ ಗೀತರಚನೆಕಾರ ವಿ. ನಾಗೇಂದ್ರ ಪ್ರಸಾದ್​ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply