masthmagaa.com:
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಜೂನ್ 11 ಅಂದ್ರೆ ನಾಳೆಯಿಂದ ಜಾರಿಯಾಗಲಿದೆ. ನಾಳೆ ವಿಧಾನಸೌಧ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯನವರು ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬಳಿಕ ಒಂದು ರೌಂಡ್ ಬಸ್ ನಲ್ಲಿ ಹೋಗುತ್ತೇವೆ. ಬೇರೆ ಪ್ರದೇಶಗಳಿಗೆ ಹೋಗುವ ಮಹಿಳೆಯರು ಬಸ್ನಲ್ಲಿ ಕುಳಿತಿರುತ್ತಾರೆ. ಆ ಬಸ್ಗೆ ಸಿಎಂ ಹಸಿರು ನಿಶಾನೆ ತೋರಿಸಿ ಚಾಲನೆ ಕೊಡುತ್ತಾರೆ. ನಂತರ ಸಾಂಕೇತಿಕವಾಗಿ ಕೆಲವರಿಗೆ ಸ್ಮಾರ್ಟ್ ಕಾರ್ಡ್ ಕೊಡುತ್ತೇವೆ. ಇನ್ನು ಮಧ್ಯಾಹ್ನ 1 ಗಂಟೆ ಬಳಿಕ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಸಿಗಲಿದೆ. ಮೂರು ತಿಂಗಳು ಗುರುತಿನ ಚೀಟಿ ಜೊತೆ ಪ್ರಯಾಣಕ್ಕೆ ಅವಕಾಶ. ಆದ್ರೆ 3 ತಿಂಗಳ ಬಳಿಕ ಸ್ಮಾರ್ಟ್ ಕಾರ್ಡ್ ಇರಬೇಕು ಅಂತ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
-masthmagaa.com
Contact Us for Advertisement