masthmagaa.com:
ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವಿನ ಬರ ಪರಿಹಾರದ ಕಾದಾಟ ಈಗ ಸುಪ್ರೀಂಕೋರ್ಟ್ ಅಂಗಳಕ್ಕೆ ತಲುಪಿದೆ. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ʻಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್ಗೆ ಬರಬೇಕಾ?ʼ ಅಂತ ಕೇಂದ್ರ ಸರ್ಕಾರಕ್ಕೆ ಖಾರವಾಗಿ ಪ್ರಶ್ನಿಸಿದೆ. ಈ ವೇಳೆ ವಿಚಾರವನ್ನ ಎರಡು ವಾರಗಳಲ್ಲಿ ಬಗೆಹರಿಸುತ್ತೇವೆ ಅಂತ ಕೇಂದ್ರ ಸರ್ಕಾರದ ಪರ ವಕೀಲ ಎಸ್.ಜಿ ಮೆಹ್ತಾ ಸುಪ್ರೀಂಗೆ ಮನವಿ ಮಾಡ್ಕೊಂಡಿದ್ದಾರೆ.
-masthmagaa.com
Contact Us for Advertisement