ರಾಜ್ಯಕ್ಕೆ ಬರಪರಿಹಾರ ವಿಚಾರ: ಸುಪ್ರೀಂ ಮೊರೆ ಹೋದ ರಾಜ್ಯ ಸರ್ಕಾರ!

masthmagaa.com:

ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವಿನ ಬರ ಪರಿಹಾರದ ಕಾದಾಟ ಈಗ ಸುಪ್ರೀಂಕೋರ್ಟ್‌ ಅಂಗಳಕ್ಕೆ ತಲುಪಿದೆ. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ʻಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್​ಗೆ ಬರಬೇಕಾ?ʼ ಅಂತ ಕೇಂದ್ರ ಸರ್ಕಾರಕ್ಕೆ ಖಾರವಾಗಿ ಪ್ರಶ್ನಿಸಿದೆ. ಈ ವೇಳೆ ವಿಚಾರವನ್ನ ಎರಡು ವಾರಗಳಲ್ಲಿ ಬಗೆಹರಿಸುತ್ತೇವೆ ಅಂತ ಕೇಂದ್ರ ಸರ್ಕಾರದ ಪರ ವಕೀಲ ಎಸ್‌.ಜಿ ಮೆಹ್ತಾ ಸುಪ್ರೀಂಗೆ ಮನವಿ ಮಾಡ್ಕೊಂಡಿದ್ದಾರೆ.

-masthmagaa.com

Contact Us for Advertisement

Leave a Reply