masthmagaa.com:
ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿರೊ ಆಮ್ ಆದ್ಮಿ ಪಕ್ಷ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 140 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದೆ. ಇದೀಗ ಪಂಜಾಬ್ ಸಿಎಂ ಭಗವಂತ್ ಮಾನ್ ಇಂದಿನಿಂದ 3 ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಆಪ್ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಲಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಿರೊ ಮಾನ್, ಗದಗ ಜಿಲ್ಲೆಯ ರೋಣದಲ್ಲಿ ರೋಡ್ ಶೋ ನಡೆಸಿದ್ದಾರೆ. ಸಂಜೆ ಹುಬ್ಬಳ್ಳಿಯಲ್ಲಿ ಮತ್ತೊಂದ್ ರೋಡ್ ಶೋ ನಡೆಸಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ, ನಂತರ ಮಧ್ಯಾಹ್ನ 1 ಗಂಟೆಗೆ ಬಾಗಲಕೋಟೆ ಜಿಲ್ಲೆಯ ತೇರದಾಳದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತೇರದಾಳದಲ್ಲಿ ರೈತರ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಏಪ್ರಿಲ್ 20ರಂದು ಆಪ್ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಜೊತೆ ಬೆಂಗಳೂರಿನ ಆಪ್ ಅಭ್ಯರ್ಥಿಗಳ ಪರ ರೋಡ್ ಶೋ ಮಾಡುತ್ತಾರೆ ಅಂತ ಹೇಳಲಾಗಿದೆ.
-masthmagaa.c0m
Contact Us for Advertisement