masthmagaa.com:
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಿಎಂ ಆಗೋದಾದ್ರೆ, ಕಾಂಗ್ರೆಸ್ ಪಕ್ಷಕ್ಕೆ ನನ್ನ KRPP ಪಕ್ಷ ಬೆಂಬಲ ಘೋಷಿಸಲಿದೆ ಅಂತ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ತಿಳಿಸಿದ್ದಾರೆ. ಮತ ಚಲಾಯಿಸಿ ಮಾತಾಡಿದ ರೆಡ್ಡಿ, ಫಲಿತಾಂಶದ ನಂತರ KRPP ಯಾವುದಾದ್ರೂ ಒಂದು ಪಕ್ಷಕ್ಕೆ ಬೆಂಬಲ ನೀಡಬೇಕಾದ ಅವಶ್ಯಕತೆ ಇದ್ದು, ಕಾಂಗ್ರೆಸ್ ಪಕ್ಷ ಬೆಂಬಲ ಕೇಳಿದರೆ, ಅದರಲ್ಲೂ ಸಿದ್ದರಾಮಯ್ಯ ಸಿಎಂ ಆಗುವ ಸಂದರ್ಭ ಏನಾದರೂ ಇದ್ರೆ ಖಂಡಿತವಾಗಿ ಬೆಂಬಲ ಸೂಚಿಸುತ್ತೇನೆ ಎಂದಿದ್ದಾರೆ. ಅಂದ್ಹಾಗೆ ಈ ಹಿಂದೆ 2012ರ ಸಮಯದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ, ಸಿದ್ದರಾಮಯ್ಯ ಹಾಗೂ ರೆಡ್ಡಿಯವರಿಗೆ ಸದನದಲ್ಲಿ ಭಾರೀ ಮಾತಿನ ಚಕಮಕಿ ನಡೆದಿತ್ತು. ಆಗ, ಜನಾರ್ದನ ರೆಡ್ಡಿಯವರು ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ಬಳ್ಳಾರಿಗೆ ಬಂದು ಕಾಂಗ್ರೆಸ್ ಸಮಾವೇಶ ಮಾಡಿ ಅಂತ ಸವಾಲ್ ಹಾಕಿದ್ರು. ಅದರ ಬೆನ್ನಲ್ಲೇ ಸಿದ್ದರಾಮಯ್ಯ, ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆಯನ್ನ ನಡೆಸಿ, ಆ ಭಾಗದಲ್ಲಿ ಕಾಂಗ್ರೆಸ್ಸನ್ನ ಒಗ್ಗೂಡಿಸಿ, ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಿದ್ದರು. 2013ರಲ್ಲಿ ನಡೆದ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆಗ ಈ ಪಾದಾಯಾತ್ರೆ ಸಿದ್ದರಾಮಯ್ಯ ಸಿಎಂ ಆಗೋಕೆ ದೊಡ್ಡ ಪ್ಲಸ್ ಪಾಯಿಂಟ್ ಆಗಿತ್ತು ಅಂತ ಹೇಳಲಾಗ್ತಿತ್ತು.
-masthmagaa.com
Contact Us for Advertisement