ನಾನು ಭ್ರಷ್ಟಾಚಾರ ಮಾಡಿರೋದು ಸಾಬೀತಾದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ: HDK

masthmagaa.com:

ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗಲೂ ವರ್ಗಾವಣೆ ದಂಧೆ ನಡೆದಿತ್ತು ಅಂತ ಹೇಳಿದ್ದ ಸಿಎಂ ಸಿದ್ದರಾಮಯ್ಯ ಅವ್ರ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಾನು ಸಿಎಂ ಆಗಿದ್ದಾಗ ಟ್ರಾನ್ಸ್‌ಫರ್‌ ವಿಚಾರದಲ್ಲಿ ನನ್ನ ಮಕ್ಕಳು ಭಾಗಿಯಾಗಿಲ್ಲ. ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಅಂತ ಎಚ್‌ಡಿಕೆ ಸವಾಲು ಹಾಕಿದ್ದಾರೆ. ಇನ್ನೊಂದ್‌ ಕಡೆ ನಿನ್ನೆ ಕುಮಾರಸ್ವಾಮಿ ನೀಡಿದ್ದ ಪೆನ್‌ಡ್ರೈವ್‌ ವಿಚಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಸಚಿವ ಕೆ.ಜೆ ಜಾರ್ಜ್‌ ಹಾಗೂ ಕುಮಾರಸ್ವಾಮಿ ವಾಗ್ವಾದ ನಡೆಸಿದ್ದಾರೆ. ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ನನ್ನ ಬಳಿ ಸಾಕ್ಷಿ ಇದೆ ಅಂತ ಹೇಳ್ತೀರಲ್ಲ. ಅದನ್ನ ಸ್ಪೀಕರ್‌ಗೆ ಕೊಡಿ ಅಂತ ಜಾರ್ಜ್‌ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರೋ ಕುಮಾರಸ್ವಾಮಿ, ಡ್ರೈವ್​ನಲ್ಲಿರುವ ಸಾಕ್ಷ್ಯ ವೀಕ್ಷಣೆಗೆ ಸದನದಲ್ಲಿ ವ್ಯವಸ್ಥೆ ಮಾಡಿ. ಸ್ಪೀಕರ್​ ಒಪ್ಪಿದರೆ ಸದನದಲ್ಲೇ ಪೆನ್​ಡ್ರೈವ್ ಪ್ರದರ್ಶನ ಮಾಡುತ್ತೇನೆ. ಇಲ್ಲೇ ಆಡಿಯೋ ಹಾಕಿಸುತ್ತೇನೆ ಅಂತ ಹೇಳಿದ್ದಾರೆ. ಈ ವೇಳೆ ಕುಮಾರಸ್ವಾಮಿ ಅವ್ರಿಗೆ ಬಿಜೆಪಿ ಸದಸ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ.

-masthmagaa.com

Contact Us for Advertisement

Leave a Reply