ಬಿಜೆಪಿಯ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ!

masthmagaa.com:

ಇನ್ನು ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಸೆಪ್ಟಂಬರ್ 8 ರಂದು ನಡೆಯಬೇಕಾಗಿದ್ದ ಜನೋತ್ಸವ ಕಾರ್ಯಕ್ರಮವನ್ನೂ ಅಧಿಕೃತವಾಗಿ ಎರಡನೇ ಬಾರಿಗೆ ಮುಂದೂಡಲಾಗಿದೆ. ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಆದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ತಡರಾತ್ರಿ ಉಮೇಶ್ ಕತ್ತಿ ನಿಧನ ಆಗಿದ್ರಿಂದ ಕಾರ್ಯಕ್ರಮ ಆಯೋಜನೆ ಬಗ್ಗೆ ಭಿನ್ನಾಭಿಪ್ರಾಯಗಳು ಎದ್ದಿದ್ವು. ಸಿದ್ದರಾಮಯ್ಯ ಕೂಡ ಕೇವಲ ಒಂದು ದಿನದ ಶೋಕಚರಣೆ ಯಾಕೆ ಅಂತ ಅಸಮಾಧಾನ ವ್ಯಕ್ತಪಡಿಸಿದ್ರು. ಈಗ ಅಂತಿಮವಾಗಿ ಕಾರ್ಯಕ್ರಮ ಮುಂದೂಡಲಾಗಿದೆ.

-masthmagaa.com

Contact Us for Advertisement

Leave a Reply