masthmagaa.com:
ಪ್ರಸಕ್ತ ವರ್ಷದ ಬಜೆಟ್ ಅಧಿವೇಶನವನ್ನ ಫೆಬ್ರವರಿ 10ರಂದು ವಿಧಾನಸಭೆಯಲ್ಲಿ ನಡೆಸೋಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಫೆಬ್ರವರಿ 10ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 16ರವರೆಗೂ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಫೆಬ್ರವರಿ 17ರಂದು ಸಿಎಂ ಬಸವರಾಜ ಬೊಮ್ಮಾಯಿ ಅವ್ರು ಬಜೆಟ್ ಮಂಡಿಸುವ ಸಾಧ್ಯತೆಯಿದೆ ಅಂತ ಸಂಪುಟ ಸಭೆ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ. ಇನ್ನು ಇದೇ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ 600 ಕೋಟಿ ರೂ. ವೆಚ್ಚದಲ್ಲಿ 100 ಡಾ. ಬಿ ಆರ್ ಅಂಬೇಡ್ಕರ್ ವಸತಿ ನಿಲಯಗಳ ನಿರ್ಮಾಣ, ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆಯಲ್ಲಿ ಸ್ಪೂರ್ತಿ ಯೋಜನೆಗೆ 12.5 ಕೋಟಿ ರೂ. ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement