masthmagaa.com:
ರಾಜ್ಯದಲ್ಲಿ 2 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಒಂದೊಂದು ಸೀಟು ಗೆದ್ದಿವೆ. ಜೆಡಿಎಸ್ ಹೀನಾಯ ಸೋಲು ಅನಿಭವಿಸಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ 31,185 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಿದ್ದಾರೆ. ಇಲ್ಲಿ 2018ರಲ್ಲಿ ಜೆಡಿಎಸ್ ಗೆದ್ದಿತ್ತು. ಈಗ ಬಿಜೆಪಿ ಗೆದ್ದಿದೆ. ಇನ್ನು ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಬಿಜೆಪಿ ಅಭ್ಯರ್ಥಿಯನ್ನ 7,373 ವೋಟುಗಳಿಂದ ಸೋಲಿಸಿದ್ದಾರೆ. ಇಲ್ಲಿ 2018ರಲ್ಲಿ ಬಿಜೆಪಿ ಗೆದ್ದಿತ್ತು. ಈಗ ಕಾಂಗ್ರೆಸ್ ಗೆದ್ದಿದೆ.
ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಪ್ರತಿಷ್ಠೆಯ ಕಣವಾಗಿತ್ತು. ಕಾರಣ ಹಾವೇರಿ ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆ. ಸಿಎಂ ಪ್ರತಿನಿಧಿಸುತ್ತಿರೋ ಶಿಗ್ಗಾವಿ ಕ್ಷೇತ್ರದ ಪಕ್ಕದಲ್ಲೇ ಇದೆ ಹಾನಗಲ್ ಕ್ಷೇತ್ರ. ಹೀಗಾಗಿ ಅಲ್ಲಿ ಗೆಲ್ಲಲು ಸಿಎಂ ಬೊಮ್ಮಾಯಿ ಭರ್ಜರಿ ಕ್ಯಾಂಪೇನ್ ನಡೆಸಿದ್ರು, ಹಲವು ಸಚಿವರನ್ನ ಅಲ್ಲಿ ನಿಯೋಜಿಸಲಾಗಿತ್ತು. ಆದ್ರೂ ಬಿಜೆಪಿ ಸೋತಿದೆ. ಬೊಮ್ಮಾಯಿ ಸಿಎಂ ಆದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್, ಜನ ಬದಲಾವಣೆ ಬಯಸ್ತಿದ್ದಾರೆ ಅಂತ ಹೇಳಿದೆ. ಜೆಡಿಎಸ್ ಕಡೆಯಿಂದ ಮಾಜಿ ಪ್ರಧಾನಿ ದೇವೇಗೌಡ್ರು ಮಾತನಾಡಿ, ಈ ಫಲಿತಾಂಶದಿಂದ ನಾವು ಧೃತಿಗೆಟ್ಟಿಲ್ಲ. ಬರೀ ಬಿಜೆಪಿ, ಕಾಂಗ್ರೆಸ್ ಆದ್ರೆ ನಾವೇನು ಮನೆಗೆ ಹೋಗಬೇಕಾ? ನಾನಿನ್ನೂ ಬದುಕಿದ್ದೇನೆ ಅಂತ ದೇವೇಗೌಡ್ರು ಹೇಳಿದ್ದಾರೆ.
-masthmagaa.com
Contact Us for Advertisement