masthmagaa.com:
ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಅಂತ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಯಾರನ್ನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತೆ ಅನ್ನೋದನ್ನ ಇವತ್ತು ಸಂಜೆ ವೇಳೆಗೆ ತಿಳಿಸ್ತೀನಿ. ಅವರ ಪಟ್ಟಿಯನ್ನ ಬಿಡುಗಡೆ ಮಾಡ್ತೀನಿ ಅಂತ ಸಿಎಂ ಹೇಳಿದ್ದಾರೆ. ಮೊನ್ನೆಯಷ್ಟೇ ದೆಹಲಿಗೆ ಹೋಗಿ ಬಂದಿದ್ದ ಸಿಎಂ ಬಿಎಸ್ವೈ, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಪಡೆದುಕೊಂಡು ಬಂದಿದ್ದರು. ಬಳಿಕ 7 ಜನರನ್ನ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತೆ ಅಂತ ಹೇಳಿದ್ದರು. ಇದರಲ್ಲಿ ಎಂಎಲ್ಸಿ ಸಿ.ಪಿ. ಯೋಗೇಶ್ವರ್ಗೆ ಮಂತ್ರಿಗಿರಿ ಸಿಗೋದು ಪಕ್ಕಾ ಎನ್ನಲಾಗ್ತಿದೆ. ಉಳಿದ 6 ಮಂದಿ ಯಾರು ಅನ್ನೋದು ಇವತ್ತು ಸಂಜೆ ಗೊತ್ತಾಗಲಿದೆ.
-masthmagaa.com
Contact Us for Advertisement