masthmagaa.com:
ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿದ್ದಾರೆ. ಮುಖ್ಯಮಂತ್ರಿಗಳ 50 ಕೋಟಿ ವಿಶೇಷ ಅನುದಾನದ ಅಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡೋಕೆ ಯೋಗೇಶ್ವರ್ ಇಂದು ಬೆಳಿಗ್ಗೆ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಗ್ರಾಮಕ್ಕೆ ಆಗಮಿಸಿದ್ರು. ಈ ವೇಳೆ ಸ್ಥಳೀಯ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ ಅವ್ರನ್ನ ಬಿಟ್ಟು ಕಾರ್ಯಕ್ರಮ ನಡೆಸಲಾಗ್ತಿದೆ ಅಂತ ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಯೋಗೇಶ್ವರ್ ಕಾರ್ಗೆ ಮುತ್ತಿಗೆ ಹಾಕಿ ಕಲ್ಲು ಹಾಗೂ ಮೊಟ್ಟೆ ಎಸೆದಿದ್ದಾರೆ ಅಂತ ಆರೋಪಿಸಲಾಗಿದೆ.
-masthmagaa.com
Contact Us for Advertisement