ಕಾಂಗ್ರೆಸ್‌ ಮುಖಂಡ ಧ್ರುವ ನಾರಾಯಾಣ ನಿಧನ!

masthmagaa.com:

ಕೆಪಿಸಿಸಿ ಕಾರ್ಯಾದ್ಯಕ್ಷ ಹಾಗೂ ಮಾಜಿ ಸಂಸದ ಆರ್‌ ಧ್ರುವನಾರಾಯಣ ಇಂದು ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಅವ್ರಿಗೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆದಲ್ಲೇ ಮೃತಪಟ್ಟಿದ್ದಾರೆ. ಧ್ರುವನಾರಾಯಣ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿದ್ದ ಅವರು ಎರಡು ಬಾರಿ ಶಾಸಕರಾಗಿ ಕೂಡ ಆಯ್ಕೆಯಾಗಿದ್ರು. ಸಂತೇಮರಹಳ್ಳಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾಗ ಕೇವಲ ಒಂದು ಮತದ ಅಂತರದಿಂದ ಗೆದ್ದು ದೇಶಾದ್ಯಂತ ಸುದ್ದಿಯಾಗಿದ್ರು. ಇದೀಗ 61ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದು ಖರ್ಗೆ, ರಾಹುಲ್‌ ಗಾಂಧಿ ಸಿದ್ರಾಮಯ್ಯ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಾಳೆ ಮಧ್ಯಾಹ್ನ 2 ಗಂಟೆಗೆ ಅವರ ಹುಟ್ಟೂರು ಹೆಗ್ಗವಾಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

-masthmagaa.com

Contact Us for Advertisement

Leave a Reply