masthmagaa.com:
ಬೆಂಗಳೂರು: ಕೊರೋನಾ ವೈರಸ್ ಮಿತಿ ಮೀರಿದ ಹಿನ್ನೆಲೆಯಲ್ಲಿ ರಾಜ್ಯವನ್ನು ಲಾಕ್ಡೌನ್ ಮಾಡಲಾಗಿದೆ. ಇವತ್ತು ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪನವರು ಕೊರೋನಾಗೆ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಬಡವರಿಗೆ 2 ತಿಂಗಳ ಪಡಿತರ, ಸಾಮಾಜಿಕ ಭದ್ರತಾ ಪಿಂಚಣಿಯನ್ನು ಮುಂಗಡವಾಗಿ ನೀಡಲು ನಿರ್ಧರಿಸಲಾಗಿದೆ. ಇನ್ನು ದಿನಗೂಲಿ ನೌಕರರಿಗೆ 2 ತಿಂಗಳ ಮಾನವ ದಿನಗಳ ಬಾಬ್ತನ್ನು ನೀಡೋದಾಗಿ ಸಿಎಂ ಘೋಷಿಸಿದ್ದಾರೆ. ಜೊತೆಗೆ ಬಡವರ ಬಂಧು ಯೋಜನೆಯಡಿ ಸಾಲ ಪಡೆದವರ ಸಾಲಮನ್ನಾ ಆಗಲಿದೆ. ರಾಜ್ಯದ 21 ಲಕ್ಷ ಕಟ್ಟಡ ಕಾರ್ಮಿಕರಿಗೆ ತಿಂಗಳಿಗೆ ಒಂದು ಸಾವಿರ ರೂಪಾಯಿ ಪರಿಹಾರ ಧನವನ್ನು ನೀಡುತ್ತೇವೆ ಅಂತ ಯಡಿಯೂರಪ್ಪ ಘೋಷಿಸಿದ್ದಾರೆ.
-masthmagaa.com
Contact Us for Advertisement