ಪಾದರಾಯನಪುರ ಗಲಾಟೆ: ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಹೇಳಿದ್ದೇನು..?

masthmagaa.com:
ಬೆಂಗಳೂರು: ಪಾದರಾಯನಪುರದಲ್ಲಿ ನಡೆದ ಗಲಾಟೆ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ‌ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಸಿಎಂ ಅವರ ಬಳಿ ಒತ್ತಾಯಿಸುತ್ತೇನೆ ಎಂದಿದ್ದಾರೆ. ಜೊತೆಗೆ ಕೊರೋನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ತಮ್ಮ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ, ಜನ‌ ಸಂಯಮದಿಂದ ವರ್ತಿಸಬೇಕೆಂದು  ಮನವಿ ಮಾಡಿದ್ದಾರೆ. 
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಪಾದರಾಯನಪುರದಲ್ಲಿ ಗೂಂಡಾಗಿರಿ ನಡೆಸಿದವರ ವಿರುದ್ಧ ಕಿಡಿಕಾರಿದ್ದಾರೆ. ಅವರು ಯಾರೇ ಆಗಿರಲಿ, ಕೂಡಲೇ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು..ನಾವು ಸರ್ಕಾರದ ಜೊತೆಗಿದ್ದೇವೆ ಎಂದು ತಿಳಿಸಿದ್ದಾರೆ.
-masthmagaa.com
Contact Us for Advertisement

Leave a Reply