masthmagaa.com:
ಕರ್ನಾಟಕದಲ್ಲಿ ಇಂದು ಮತ್ತೆ ನಾಲ್ವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರು, ಮೈಸೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ ಒಂದೊಂದು ಕೇಸ್ಗಳು ಪತ್ತೆಯಾಗಿವೆ. ಆರೋಗ್ಯ ಇಲಾಖೆಯೇ ಈ ವಿಚಾರವನ್ನು ಖಚಿತಪಡಿಸಿದೆ.
ಬೆಂಗಳೂರಿನಲ್ಲಿ ಪತ್ತೆಯಾದ ಸೋಂಕಿತ ವೃದ್ಧ ಹೈದ್ರಾಬಾದ್ನಿಂದ ಬಂದಿದ್ದರು ಅನ್ನೋದು ತಿಳಿದುಬಂದಿದೆ. ಆತಂಕದ ವಿಚಾರ ಅಂದ್ರೆ ಮೈಸೂರಿನ ನಂಜನಗೂಡಿನ ನೌಕರನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಈತ ವಿದೇಶದಿಂದ ಮರಳಿರಲಿಲ್ಲ. ಅಲ್ಲದೆ ಕೊರೋನಾ ಸೋಂಕಿತರೊಂದಿಗೂ ಸಂಪರ್ಕದಲ್ಲಿ ಇರಲಿಲ್ಲ. ಆದರೂ ಈತನಲ್ಲಿ ಕೊರೋನಾ ಸೋಂಕು ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಜೊತೆಗೆ ಕೊರೋನಾ ಸೋಂಕು 3ನೇ ಹಂತಕ್ಕೆ ತಲುಪಿದೆಯಾ ಅನ್ನೋ ಅನುಮಾನ ಮೂಡಿಸಿದೆ. ಸದ್ಯ ಈತನೊಂದಿಗೆ ಸಂಪರ್ಕದಲ್ಲಿದ್ದ 7 ಮಂದಿ ಮೇಲೆ ನಿಗಾ ಇರಿಸಲಾಗಿದೆ.
-masthmagaa.com
Contact Us for Advertisement