masthmagaa.com:
ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಲೇ ಇದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ 25 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ 42 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕು ತಗುಲಿದವರ ಸಂಖ್ಯೆ 384ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ ಬಾಗಲಕೋಟೆ, ಮೈಸೂರಿನ ತಲಾ 7 ಮಂದಿ ಸೇರಿದ್ದಾರೆ. ಇನ್ನು ಬೆಂಗಳೂರಿನ ಮೂವರು, ವಿಜಯಪುರ, ಕಲಬುರಗಿಯ ತಲಾ ಇಬ್ಬರಲ್ಲಿ ಈ ಸೋಂಕು ಪತ್ತೆಯಾಗಿದೆ. ಮಂಡ್ಯ, ಗದಗ, ಧಾರವಾಡ, ಬೆಳಗಾವಿಯ ತಲಾ ಒಬ್ಬರಲ್ಲಿ ಸೋಂಕು ದೃಢವಾಗಿದೆ.
-masthmagaa.com
Contact Us for Advertisement