masthmagaa.com:
ಮಂಡ್ಯ: ಕೊರೋನಾ ಪರೀಕ್ಷೆ ವೇಳೆ ಗೂಂಡಾಗಿರಿ ನಡೆಸಿದ್ದ ಜೆಡಿಎಸ್ ಎಂಎಲ್ಸಿ ಶ್ರೀಕಂಠೇಗೌಡ ವಿರುದ್ಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವೈದ್ಯಕೀಯ ಸಿಬ್ಬಂದಿ ಮತ್ತು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಎ1 ಆರೋಪಿ ಜೆಡಿಎಸ್ ಎಂಎಲ್ಸಿ ಶ್ರೀಕಂಠೇಗೌಡರೇ ಆಗಿದ್ದಾರೆ. ನಂತರ ಅವರ ಮಗ ಕೃಷಿಕ್ ಎ-2 ಆರೋಪಿಯಾಗಿದ್ದಾರೆ. ಇವರ ಜೊತೆಗೆ ಇನ್ನೂ ಮೂವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಇಂದು ಅಂಬೇಡ್ಕರ್ ಭವನದಲ್ಲಿ ಪತ್ರಕರ್ತರ ಕೊರೋನಾ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಆದ್ರೆ ಈ ವೇಳೆ ಸ್ಥಳಕ್ಕೆ ಬಂದ ಎಂಎಲ್ಸಿ ಶ್ರೀಕಂಠೇಗೌಡ ಮತ್ತು ಅವರ ಮಗ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೊರೋನಾ ಹರಡೋಕೆ ಇಲ್ಲಿಗೆ ಬಂದಿದ್ದೀರಾ ಅಂತ ಕಿಡಿಕಾರಿದ್ದಾರೆ. ಈ ವೇಳೆ ವಾಗ್ವಾದ ನಡೆದು ಶ್ರೀಕಂಠೇಗೌಡರ ಪುತ್ರ ಹಲ್ಲೆಗೆ ಯತ್ನಿಸಿದ್ದಾನೆ. ತಕ್ಷಣವೇ ಪೊಲೀಸರು ಶ್ರೀಕಂಠೇಗೌಡರ ಮಗ ಕೃಷಿಕ್ನನ್ನು ವಶಕ್ಕೆ ಪಡೆದಿದ್ದರು.
-masthmagaa.com
Contact Us for Advertisement