masthmagaa.com:
ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆ ಸುಪ್ರೀಂಕೋರ್ಟ್ನಲ್ಲಿ ಇತ್ಯರ್ಥವಾಗೋವರೆಗೆ ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಅಂತ ಆಗ್ರಹಿಸಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ, ಕರ್ನಾಟಕ ಡಿಸಿಎಂ ಲಕ್ಷ್ಮಣ ಸವದಿ ಖಡಕ್ ತಿರುಗೇಟು ಕೊಟ್ಟಿದ್ದಾರೆ. ಗಡಿ ಭಾಗವನ್ನ ಮುಂಬೈ-ಕರ್ನಾಟಕ ಅಂತಾನೆ ಕರೆಯಲಾಗುತ್ತೆ. ಅಂದ್ರೆ ಮಹಾರಾಷ್ಟ್ರ ರಾಜಧಾನಿ ಮುಂಬೈ ಮೇಲೆ ನಮಗೂ ಹಕ್ಕಿದೆ ಅಂತಾಯ್ತು. ಹೀಗಾಗಿ ಸುಪ್ರೀಂಕೋರ್ಟ್ನಲ್ಲಿ ಗಡಿ ಸಮಸ್ಯೆ ಇತ್ಯರ್ಥವಾಗೋವರೆಗೆ ಮುಂಬೈಯನ್ನ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಅಂತ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಗ್ರಹಿಸಿದ್ದಾರೆ. ಜೊತೆಗೆ ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕು. ಅಲ್ಲಿವರೆಗೆ ಮುಂಬೈಯನ್ನು ಕೇಂದ್ರಾಡಳಿ ಪ್ರದೇಶವನ್ನಾಗಿ ಘೋಷಿಸಬೇಕು ಅಂತ ಕೇಂದ್ರ ಸರ್ಕಾರಕ್ಕೆ ಮನವಿ ಮಾಡ್ತೀನಿ ಎಂದಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿಯವರ ಈ ಮಾತುಗಳನ್ನ ಕೇಳಿದ್ರೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉರ್ಕೊಳ್ಳೋದಂತೂ ಗ್ಯಾರಂಟಿ..
-masthmagaa.com
Contact Us for Advertisement