masthmagaa.com:

ನೂತನ ಕೃಷಿ ಕಾಯ್ದೆಗಳನ್ನ ವಿರೋಧಿಸಿ ರೈತ ಸಂಘಟನೆಗಳು ಡಿಸೆಂಬರ್ 8ಕ್ಕೆ ನೀಡಿರುವ ‘ಭಾರತ್​ ಬಂದ್​​’ ಕರೆಗೆ ರಾಜ್ಯ ರೈತ ಸಂಘಟನೆಗಳು ಕೂಡ ಬೆಂಬಲ ಸೂಚಿಸಿವೆ. ಹೀಗಾಗಿ ಡಿಸೆಂಬರ್​ 8ರಂದು ಕರ್ನಾಟಕಕ್ಕೂ ಬಂದ್ ಬಿಸಿ ತಟ್ಟುವ ಸಾಧ್ಯತೆ ಇದೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಈ ಬಗ್ಗೆ ಮಾತನಾಡಿದ್ದು, ಬೆಂಗಳೂರನ್ನ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಡಿಸೆಂಬರ್ 8ರಂದು ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ. ಡಿಸೆಂಬರ್ 9ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತೀವಿ. ಇದಕ್ಕೆ ಎಲ್ಲಾ ಸಂಘಟನೆಗಳು ಬೆಂಬಲ ಕೊಡಬೇಕು ಅಂತ ಮನವಿ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply