masthmagaa.com:
ನೂತನ ಕೃಷಿ ಕಾಯ್ದೆಗಳನ್ನ ವಿರೋಧಿಸಿ ರೈತ ಸಂಘಟನೆಗಳು ಡಿಸೆಂಬರ್ 8ಕ್ಕೆ ನೀಡಿರುವ ‘ಭಾರತ್ ಬಂದ್’ ಕರೆಗೆ ರಾಜ್ಯ ರೈತ ಸಂಘಟನೆಗಳು ಕೂಡ ಬೆಂಬಲ ಸೂಚಿಸಿವೆ. ಹೀಗಾಗಿ ಡಿಸೆಂಬರ್ 8ರಂದು ಕರ್ನಾಟಕಕ್ಕೂ ಬಂದ್ ಬಿಸಿ ತಟ್ಟುವ ಸಾಧ್ಯತೆ ಇದೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಈ ಬಗ್ಗೆ ಮಾತನಾಡಿದ್ದು, ಬೆಂಗಳೂರನ್ನ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಡಿಸೆಂಬರ್ 8ರಂದು ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ. ಡಿಸೆಂಬರ್ 9ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತೀವಿ. ಇದಕ್ಕೆ ಎಲ್ಲಾ ಸಂಘಟನೆಗಳು ಬೆಂಬಲ ಕೊಡಬೇಕು ಅಂತ ಮನವಿ ಮಾಡಿದ್ದಾರೆ.
-masthmagaa.com
Contact Us for Advertisement