masthmagaa.com:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆಗ್ತಿದ್ದಂಗೆ ಸಿಎಂ ಸಿದ್ದರಾಮಯ್ಯ ಅವ್ರು ಇಂದಿರಾ ಕ್ಯಾಂಟೀನ್ಗಳ ದುರಸ್ತಿಯತ್ತ ಹೆಚ್ಚು ಗಮನಹರಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಇಂದಿರಾ ಕ್ಯಾಂಟೀನ್ಗಳಲ್ಲಿ ಹೊಸದಾಗಿ ಆಹಾರದ ಮೆನು ಸಿದ್ಧಪಡಿಸಿ, ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡಿ ಅಂತ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈಗ ಮತ್ತೆ ಬೆಂಗಳೂರಿನಲ್ಲಿ ಹೊಸದಾಗಿ 50 ಇಂದಿರಾ ಕ್ಯಾಂಟೀನ್ಗಳನ್ನು ತೆರೆಯಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಯಂತೆ BBMP 198 ರಿಂದ 250ಕ್ಕೆ ಇಂದಿರಾ ಕ್ಯಾಂಟಿನ್ ಏರಿಕೆಗೆ ಮುಂದಾಗಿದೆ. 24 ಮೊಬೈಲ್ ಇಂದಿರಾ ಕ್ಯಾಂಟಿನ್ಗಳು ಸೇರಿದಂತೆ 250 ಇಂದಿರಾ ಕ್ಯಾಂಟಿನ್ ಸ್ಥಾಪನೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟಿನ್ ಹೈಟೆಕ್ ಮಾಡಿ ಉತ್ತಮ ಗುಣಮಟ್ಟದ ಆಹಾರ ನೀಡಲು ಹೆಚ್ಚುವರಿಯಾಗಿ 15 ಕೋಟಿ ಅನುದಾನ ಬೇಕಾಗಿದೆ. ಹೀಗಾಗಿ ಹೆಚ್ಚುವರಿ ಅನುದಾನಕ್ಕೆ ಪಾಲಿಕೆ, ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದೆ. ಪಂಚ ಗ್ಯಾರಂಟಿಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟಿನ್ಗೆ ಮತಷ್ಟು ಅನುದಾನ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಇಂದಿರಾ ಕ್ಯಾಂಟಿನ್ ದುರಸ್ಥಿಗೆ ಪ್ರತಿ ಇಂದಿರಾ ಕ್ಯಾಂಟಿನ್ಗೂ ಒಂದು ಲಕ್ಷ ತುರ್ತು ಅನುದಾನ ಬಿಡುಗಡೆ ಮಾಡಿದ್ದಾರೆ.
-masthmagaa.com
Contact Us for Advertisement