masthmagaa.com:
ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕಾರ್ಮಿಕರು ಮತ್ತು ಬಡ ಕಾರ್ಮಿಕರ ಪರಿಸ್ಥಿತಿಯನ್ನು ನೋಡಿಕೊಂಡು ಭಾನುವಾರದಿಂದ ಮಂಗಳವಾರದವರೆಗೆ (ಮೇ 3ರಿಂದ ಮೇ 5) ಬೆಂಗಳೂರು ಮತ್ತು ಜಿಲ್ಲಾ ಕೇಂದ್ರಗಳಿಂದ ತಮ್ಮ ತಮ್ಮ ಊರುಗಳಿಗೆ ಹೋಗುವವರಿಗೆ ಉಚಿತವಾಗಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ತೆರಳಲು ಅವಕಾಶ ನೀಡಲಾಗಿದೆ.
ಇದರ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಅಂತ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಆದ್ರೆ ಯಾವುದೇ ಬಸ್ ನಿಲ್ದಾಣಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ನೋಡಿಕೊಳ್ಳುವುದರ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಮನವಿ ಮಾಡಿಕೊಳ್ಳಲಾಗಿದೆ.
-masthmagaa.com
Contact Us for Advertisementಉಚಿತ ಪ್ರಯಾಣಕ್ಕೆ ಅವಕಾಶ
ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರು, ಇಂದಿನಿಂದ ಮಂಗಳವಾರದವರೆಗೆ ಕೆಎಸ್ ಆರ್ ಟಿಸಿ ಬಸ್ಗಳಲ್ಲಿ ಬೆಂಗಳೂರು ಮತ್ತು ಜಿಲ್ಲಾ ಕೇಂದ್ರಗಳಿಂದ ತಮ್ಮ ಊರುಗಳಿಗೆ ಉಚಿತವಾಗಿ ತೆರಳಬಹುದು.
ನೂಕುನುಗ್ಗಲು ಉಂಟಾಗದಂತೆ ನೋಡಿಕೊಳ್ಳುವುದರ ಜತೆಗೆ ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಲು ಮನವಿ.#ಮನೆಯಲ್ಲೇಇರಿ@BSYBJP pic.twitter.com/jPWmHsplNR— CM of Karnataka (@CMofKarnataka) May 3, 2020