ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಿಂದ ಉಚಿತ ಬಸ್ ವ್ಯವಸ್ಥೆ

masthmagaa.com:

ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕಾರ್ಮಿಕರು ಮತ್ತು ಬಡ ಕಾರ್ಮಿಕರ ಪರಿಸ್ಥಿತಿಯನ್ನು ನೋಡಿಕೊಂಡು ಭಾನುವಾರದಿಂದ ಮಂಗಳವಾರದವರೆಗೆ (ಮೇ 3ರಿಂದ ಮೇ 5) ಬೆಂಗಳೂರು ಮತ್ತು ಜಿಲ್ಲಾ ಕೇಂದ್ರಗಳಿಂದ ತಮ್ಮ ತಮ್ಮ ಊರುಗಳಿಗೆ ಹೋಗುವವರಿಗೆ ಉಚಿತವಾಗಿ ಕೆಎಸ್​ಆರ್​ಟಿಸಿ ಬಸ್‍ಗಳಲ್ಲಿ ತೆರಳಲು ಅವಕಾಶ ನೀಡಲಾಗಿದೆ.

ಇದರ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಅಂತ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಆದ್ರೆ ಯಾವುದೇ ಬಸ್​ ನಿಲ್ದಾಣಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ನೋಡಿಕೊಳ್ಳುವುದರ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಮನವಿ ಮಾಡಿಕೊಳ್ಳಲಾಗಿದೆ.

-masthmagaa.com

Contact Us for Advertisement

Leave a Reply